Wednesday, 21 August 2013

ನಾಗರಪಂಚಮಿ



ತಿಥಿ: ಶ್ರಾವಣ ಶುಕ್ಲ ಪಂಚಮಿ
ಇತಿಹಾಸ: ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನನ್ನು ಪ್ರಸನ್ನಗೊಳಿಸಿಕೊಂಡನು. ಜನಮೇಜಯ ರಾಜನು ‘ವರವನ್ನು ಕೇಳು’ ಎಂದು ಹೇಳಿದಾಗ, ಆಸ್ತಿಕನು ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂಬ ವರವನ್ನು ಕೇಳಿಕೊಂಡನು. ಜನಮೇಜಯನು ಸರ್ಪಯಜ್ಞವನ್ನು ನಿಲ್ಲಿಸಿದ ದಿನವು ಪಂಚಮಿಯಾಗಿತ್ತು.

ನಾಗರಪಂಚಮಿಯ ದಿನ ಸಾತ್ತ್ವಿಕತೆ ಗ್ರಹಿಸಲು ನಾಗರಪಂಚಮಿ ಉಪಯುಕ್ತ ಕಾಲ:
ಪಂಚಪ್ರಾಣಗಳೇ ಪಂಚನಾಗಗಳಾಗಿವೆ. ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಈ ದಿನದಂದು ಶೇಷನಾಗ ಮತ್ತು ಶ್ರೀವಿಷ್ಣುವಿಗೆ ಮುಂದಿನಂತೆ ಪ್ರಾರ್ಥನೆ ಮಾಡಬೇಕು - ‘ತಮ್ಮ ಕೃಪೆಯಿಂದ ಈ ದಿನದಂದು ಶಿವ ಲೋಕದಿಂದ ಪ್ರಕ್ಷೇಪಿತವಾಗುವ ಲಹರಿಗಳು ನನ್ನಿಂದ ಹೆಚ್ಚೆಚ್ಚು ಗ್ರಹಣವಾಗಲಿ. ನನ್ನ ಆಧ್ಯಾತ್ಮಿಕ ಪ್ರಗತಿಗೆ ಎದುರಾಗುವ ಎಲ್ಲ ಅಡಚಣೆಗಳೂ ನಾಶವಾಗಲಿ. ದೇವತೆಗಳ ಶಕ್ತಿಯು ನನ್ನ ಪಂಚಪ್ರಾಣಗಳಲ್ಲಿ ಸಂಗ್ರಹವಾಗಿ ಅದು ಈಶ್ವರ ಪ್ರಾಪ್ತಿಗಾಗಿ ಮತ್ತು ರಾಷ್ಟ್ರ ರಕ್ಷಣೆಗಾಗಿ ಉಪಯೋಗವಾಗಲಿ. ನನ್ನ ಪಂಚಪ್ರಾಣದ ಶುದ್ಧಿಯಾಗಲಿ.’ ನಾಗದೇವತೆಯು ಸಂಪೂರ್ಣ ಬ್ರಹ್ಮಾಂಡದ ಕುಂಡಲಿನಿಯಾಗಿದ್ದಾನೆ. ಪಂಚಪ್ರಾಣ ವೆಂದರೆ ಪಂಚಭೌತಿಕ ತತ್ತ್ವದಿಂದ ಉಂಟಾದ ಶರೀರದ ಸೂಕ್ಷ್ಮರೂಪವಾಗಿದೆ. ಸ್ಥೂಲ ದೇಹವು ಪ್ರಾಣಹೀನವಾಗಿದೆ ಮತ್ತು ಸ್ಥೂಲ ದೇಹದಲ್ಲಿ ಚಲಿಸುವ ಪ್ರಾಣವಾಯುವು ಪಂಚಪ್ರಾಣದಿಂದ ಬರುತ್ತದೆ.

ನಾಗರಪಂಚಮಿಯಂದು ಮಾಡಿದ ಉಪವಾಸದ ಮಹತ್ವ:
೫ಯುಗಗಳ ಹಿಂದೆ ಸತ್ಯೇಶ್ವರೀ ಎಂಬ ಹೆಸರಿನ ಕನಿಷ್ಠ ದೇವಿಯಿದ್ದಳು. ಸತ್ಯೇಶ್ವರನು ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರಪಂಚಮಿಯ ಹಿಂದಿನ ದಿನ ಮೃತ್ಯು ಹೊಂದಿದನು. ಆಗ ಸಹೋದರನ ಮೃತ್ಯುವಿನ ಶೋಕದಲ್ಲಿ ಸತ್ಯೇಶ್ವರಿಯು ಆಹಾರವನ್ನು ಸ್ವೀಕರಿಸಲಿಲ್ಲ. ಆದುದರಿಂದ ಆ ದಿನ ಸ್ತ್ರೀಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. ‘ಸಹೋದರನಿಗೆ ಅಖಂಡ ಆಯುಷ್ಯವು ದೊರಕಲಿ, ಅನೇಕ ಆಯುಧಗಳು ಪ್ರಾಪ್ತವಾಗಲಿ ಮತ್ತು ಅವನು ಪ್ರತಿಯೊಂದು ದುಃಖ ಮತ್ತು ಸಂಕಟಗಳಿಂದ ಪಾರಾಗಲಿ’ ಎನ್ನುವುದು ಸಹ ಈ ಉಪವಾಸದ ಹಿಂದಿನ ಕಾರಣವಾಗಿದೆ. ನಾಗರಪಂಚಮಿಯ ಹಿಂದಿನ ದಿನ ಪ್ರತಿಯೊಬ್ಬ ಸಹೋದರಿಯು ದೇವರಲ್ಲಿ ಮೊರೆ ಇಡುವುದರಿಂದ ಅವಳ ಸಹೋದರನಿಗೆ ಲಾಭವಾಗುತ್ತದೆ ಮತ್ತು ಅವನ ರಕ್ಷಣೆಯಾಗುತ್ತದೆ.

ನಾಗನ ಪೂಜೆ ಮಾಡುವುದರ ಹಿಂದಿನ ಶಾಸ್ತ್ರ:
ಸತ್ಯೇಶ್ವರಿಗೆ ಅವಳ ಸಹೋದರನು ನಾಗರೂಪದಲ್ಲಿ ಕಂಡನು. ಆಗ ಅವಳು ಆ ನಾಗರೂಪವನ್ನು ತನ್ನ ಸಹೋದರನೆಂದು ಭಾವಿಸಿದಳು. ಆಗ ನಾಗದೇವನು, ನನ್ನನ್ನು ಸಹೋದರನೆಂದು ಭಾವಿಸಿ ಪೂಜೆ ಮಾಡಿದ ಸಹೋದರಿಯ ರಕ್ಷಣೆಯನ್ನು ನಾನು ಮಾಡುವೆನು ಎಂದು ಅವಳಿಗೆ ವಚನ ನೀಡಿದನು. ಆದುದರಿಂದಲೇ ಆ ದಿನ ಪ್ರತಿಯೊಬ್ಬ ಸ್ತ್ರೀಯು ನಾಗನ ಪೂಜೆ ಮಾಡಿ ನಾಗರಪಂಚಮಿಯನ್ನು ಆಚರಿಸುತ್ತಾಳೆ.

ನಾಗನ ಮಹಾತ್ಮೆ:
೧. ‘ಶೇಷನಾಗನು ಪಾತಾಳದಲ್ಲಿ ವಾಸಿಸುತ್ತಾನೆ. ಅವನು ತನ್ನ ಹೆಡೆಯ ಮೇಲೆ ಪೃಥ್ವಿಯನ್ನು ಧರಿಸಿದ್ದಾನೆ. ಅವನಿಗೆ ಸಹಸ್ರ ಹೆಡೆಗಳಿವೆ. ಪ್ರತಿಯೊಂದು ಹೆಡೆಯ ಮೇಲೆ ಒಂದು ವಜ್ರವಿದೆ. ಅವನು ಶ್ರೀವಿಷ್ಣುವಿನ ತಮೋಗುಣದಿಂದ ಉತ್ಪನ್ನವಾಗಿದ್ದಾನೆ. ಪ್ರತಿಯೊಂದು ಕಲ್ಪದ ಅಂತ್ಯದಲ್ಲಿ ಶ್ರೀವಿಷ್ಣು ಮಹಾಸಾಗರದಲ್ಲಿ ಶೇಷಾಸನದ ಮೇಲೆ ಶಯನ ಮಾಡುತ್ತಾನೆ. ತ್ರೇತಾಯುಗದಲ್ಲಿ ಶ್ರೀವಿಷ್ಣು ರಾಮನ ಅವತಾರವನ್ನು ತೆಗೆದುಕೊಂಡಾಗ ಶೇಷನು ಲಕ್ಷ್ಮಣನ ಅವತಾರವನ್ನು ತೆಗೆದುಕೊಂಡಿದ್ದನು. ದ್ವಾಪರ ಮತ್ತು ಕಲಿಯುಗದ ಸಂಧಿಕಾಲದಲ್ಲಿ ಕೃಷ್ಣನ ಅವತಾರವಾದಾಗ ಶೇಷನು ಬಲರಾಮನಾಗಿದ್ದನು.
೨. ‘ಶ್ರೀಕೃಷ್ಣನು ಯಮುನಾ ನದಿಯ ಆಳದಲ್ಲಿದ್ದ ಕಾಲಿಯಾ ನಾಗನನ್ನು ಮರ್ದನ ಮಾಡಿದನು. ಆ ದಿನವು ಶ್ರಾವಣ ಶುಕ್ಲ ಪಂಚಮಿಯಾಗಿತ್ತು.
೩. ‘ನಾಗಗಳಲ್ಲಿನ ಶ್ರೇಷ್ಠನಾದ ‘ಅನಂತ’ನೇ ನಾನು’, ಎಂದು ಗೀತೆಯಲ್ಲಿ (೧೦.೨೯) ಶ್ರೀಕೃಷ್ಣ ತನ್ನ ವಿಭೂತಿಯನ್ನು ಹೇಳುತ್ತಾನೆ.
ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಮ್| ಶಂಖಪಾಲಂ ಧೃತರಾಷ್ಟ್ರಂ ತಕ್ಷಕಂ, ಕಾಲಿಯಂ ತಥಾ||
ಅನಂತ, ವಾಸುಕೀ, ಶೇಷ, ಪದ್ಮನಾಭ, ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಹೀಗೆ ಒಂಭತ್ತು ಜಾತಿಯ ನಾಗಗಳ ಆರಾಧನೆಯನ್ನು ಮಾಡುತ್ತಾರೆ. ಇದರಿಂದ ಸರ್ಪಭಯವಿರುವುದಿಲ್ಲ ಮತ್ತು ವಿಷದಿಂದ ತೊಂದರೆಯಾಗುವುದಿಲ್ಲ.’

ಪೂಜೆ: ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಪವಿತ್ರಕಗಳೆಂದರೆ ಸೂಕ್ಷ್ಮಾತಿಸೂಕ್ಷ್ಮ ದೈವೀ ಕಣಗಳು (ಚೈತನ್ಯಕಣಗಳು).

ಭಾವಾರ್ಥ: ‘ಜಗತ್ತಿನಲ್ಲಿನ ಎಲ್ಲ ಜೀವಜಂತುಗಳು ಜಗತ್ತಿನ ಕಾರ್ಯಕ್ಕಾಗಿ ಪೂರಕವಾಗಿವೆ. ನಾಗರಪಂಚಮಿಯ ದಿನ ನಾಗಗಳ ಪೂಜೆಯಿಂದ ‘ಭಗವಂತನು ಅವುಗಳ ಮೂಲಕ ಕಾರ್ಯವನ್ನು ಮಾಡುತ್ತಿದ್ದಾನೆ’, ಎಂಬ ವಿಶಾಲ ದೃಷ್ಟಿಕೋನವನ್ನಿಡಲು ಕಲಿಯುವುದಿರುತ್ತದೆ.’ - ಪ.ಪೂ.ಪರಶರಾಮ ಪಾಂಡೇ ಮಹಾರಾಜರು, ಸನಾತನ ಆಶ್ರಮ, ದೇವದ, ಪನವೇಲ.

ನಿಷೇಧ: ನಾಗರಪಂಚಮಿಯ ದಿನ ಏನನ್ನೂ ಹೆಚ್ಚಬಾರದು, ಕೊಯ್ಯಬಾರದು, ಕರಿಯಬಾರದು, ಒಲೆಯ ಮೇಲೆ ತವೆಯನ್ನು ಇಡಬಾರದು ಮುಂತಾದ ನಿಯಮಗಳನ್ನು ಪಾಲಿಸಬೇಕು. ಈ ದಿನ ಭೂಮಿಯನ್ನು ಅಗೆಯಬಾರದು.

-ಸಂಗ್ರಹ 
 

ಮೂಗುತಿ ಧರಿಸುವುದರಿಂದಾಗುವ ಲಾಭಗಳು



೧. ‘ಮೂಗುತಿಯನ್ನು ಧರಿಸುವುದರಿಂದ ಮೂಗಿನ ಬಿಂದುವಿನ ಮೇಲೆ ಒತ್ತಡವು ನಿರ್ಮಾಣವಾಗಿ ‘ಬಿಂದುಒತ್ತಡದ (ಆಕ್ಯುಪ್ರೆಶರ್)’ ಉಪಚಾರವಾಗುವುದರಿಂದ ಅಲ್ಲಿನ ಕಪ್ಪು ಶಕ್ತಿಯು ಕಡಿಮೆಯಾಗುತ್ತದೆ.
೨. ಕೆಟ್ಟ ಶಕ್ತಿಗಳಿಂದ ಉಸಿರಾಟದ ಮಾರ್ಗದಿಂದ ಹಲ್ಲೆಯಾಗದಂತೆ ಮೂಗುತಿಯು ಮೂಗು ಮತ್ತು ಶ್ವಾಸಮಾರ್ಗವನ್ನು ರಕ್ಷಿಸುತ್ತದೆ.’
೩. ‘ಮೂಗುತಿಯಲ್ಲಿರುವ ಸಾತ್ತ್ವಿಕತೆ ಮತ್ತು ಚೈತನ್ಯದಿಂದ ಮೂಗಿನ ಸುತ್ತಲೂ ಚೈತನ್ಯದ ವಲಯವು ನಿರ್ಮಾಣವಾಗುತ್ತದೆ ಮತ್ತು ಮೂಗಿನ ಸುತ್ತಲಿನ ವಾಯುಮಂಡಲವು ಶುದ್ಧವಾಗುತ್ತದೆ. ಇದರಿಂದ ಶ್ವಾಸಮಾರ್ಗದಿಂದ ಶುದ್ಧಗಾಳಿಯು ದೇಹವನ್ನು ಪ್ರವೇಶಿಸಬಲ್ಲದು.’
ಸ್ತ್ರೀಯರಿಗೆ ಮಾತ್ರ ಮೂಗುತಿ ಹಾಕಲು ಹೇಳಿರುವುದರ ಹಿಂದೆಯೂ ಶಾಸ್ತ್ರವಿದೆ. ಸ್ತ್ರೀಯರ ಮನಸ್ಸು ಚಂಚಲವಾಗಿರುತ್ತದೆ. ಮೂಗುತಿಯನ್ನು ಧರಿಸುವುದರಿಂದ ಸ್ತ್ರೀಯರ ಚಂದ್ರನಾಡಿ ಕಾರ್ಯನಿರತವಾಗಿ ಮನಸ್ಸು ಸ್ಥಿರವಾಗುತ್ತದೆ. ಸ್ತ್ರೀಯರು ಯಾವುದೇ ಕಾರ್ಯವನ್ನು ಮಾಡುವಾಗ ಯೋಗ್ಯ ನಿರ್ಣಯ ತೆಗೆದುಕೊಳ್ಳಲು ಅನುಕೂಲವಾಗುತ್ತದೆ.

ಇದರಿಂದಲೇ ಹಿಂದೂ ಧರ್ಮದ ಮಹಾನತೆಯು ಗಮನಕ್ಕೆ ಬರುತ್ತದೆ! ಹಿಂದೂ ಧರ್ಮವು ಪ್ರತಿಯೊಂದು ವಿಷಯದಿಂದ ಅಂದರೆ ಆಚಾರಧರ್ಮದಿಂದ ಮಾನವನಿಗೆ ಆಧ್ಯಾತ್ಮಿಕ, ಶಾರೀರಿಕ ಮತ್ತು ಮಾನಸಿಕವಾಗಿ ಯೋಗ್ಯವಾದ ಕೃತಿಯನ್ನೇ ಮಾಡಲು ಕಲಿಸುತ್ತದೆ. ಮನುಷ್ಯನಿಗೆ ಅದರ ಶಾಸ್ತ್ರ ತಿಳಿಯದಿದ್ದರೂ, ಶ್ರದ್ಧೆಯಿಂದ ಅದೇ ರೀತಿ ಪಾಲನೆ ಮಾಡಿದರೆ ಅವನ ಐಹಿಕ ಮತ್ತು ಪಾರಮಾರ್ಥಿಕ ಜೀವನವು ಆನಂದದಲ್ಲಿರುವುದು. ಇದಕ್ಕೆ ಸಂದೇಹವೇ ಇಲ್ಲ.

ಟಿಕಲಿಯನ್ನು ಹಚ್ಚಿಕೊಳ್ಳುವುದಕ್ಕಿಂತ ಕುಂಕುಮ ಹಚ್ಚಿಕೊಳ್ಳುವುದು ಏಕೆ ಯೋಗ್ಯ?



ಕುಂಕುಮವು ಪಾವಿತ್ರ್ಯದ ಮತ್ತು ಮಾಂಗಲ್ಯದ ಪ್ರತೀಕವಾಗಿದೆ. ಕೃತಕ ವಸ್ತುಗಳಿಗಿಂತ ನೈಸರ್ಗಿಕ ವಸ್ತುಗಳಲ್ಲಿ ದೇವತೆಗಳ ಚೈತನ್ಯಲಹರಿಗಳನ್ನು ಸೆಳೆದುಕೊಳ್ಳುವ ಮತ್ತು ಪ್ರಕ್ಷೇಪಿಸುವ ಕ್ಷಮತೆಯು ಹೆಚ್ಚಿರುತ್ತದೆ. ಕುಂಕುಮವನ್ನು ಅರಿಶಿನದಿಂದ ತಯಾರಿಸಿರುವುದರಿಂದ ಟಿಕಲಿಗಿಂತ ಕುಂಕುಮವು ಹೆಚ್ಚು ನೈಸರ್ಗಿಕವಾಗಿದೆ, ಅಲ್ಲದೇ ಕುಂಕುಮದಿಂದ ಪ್ರಕ್ಷೇಪಿತವಾಗುವ ಸೂಕ್ಷ್ಮಪರಿಮಳದಲ್ಲಿ ಬ್ರಹ್ಮಾಂಡದಲ್ಲಿನ ದೇವತೆಗಳ ಪವಿತ್ರಕಗಳನ್ನು ಆಕರ್ಷಿಸುವ ಹಾಗೂ ಪ್ರಕ್ಷೇಪಿಸುವ ಕ್ಷಮತೆಯಿರುವುದರಿಂದ ಕುಂಕುಮವು ತಾರಕ-ಮಾರಕ ಚೈತನ್ಯಲಹರಿಗಳನ್ನು ಪ್ರಕ್ಷೇಪಿಸಿ ಜೀವವನ್ನು ಕೆಟ್ಟ ಶಕ್ತಿಗಳಿಂದ ರಕ್ಷಿಸುತ್ತದೆ. ಆದುದರಿಂದ ಟಿಕಲಿಯನ್ನು ಹಚ್ಚಿಕೊಳ್ಳುವುದಕ್ಕಿಂತ ಕುಂಕುಮವನ್ನು ಹಚ್ಚಿಕೊಳ್ಳುವುದು ಸಾತ್ತ್ವಿಕತೆಯನ್ನು ಸೆಳೆದುಕೊಳ್ಳುವ ದೃಷ್ಟಿಯಿಂದ ಹೆಚ್ಚು ಫಲದಾಯಕವಾಗಿದೆ.


ಟಿಕಲಿಯ ಹಿಂಬದಿಯಲ್ಲಿ ಉಪಯೋಗಿಸಿದ ಅಂಟು ತಮೋಗುಣಿಯಾಗಿರುವುದರಿಂದ ಅದು ರಜ-ತಮಾತ್ಮಕ ಲಹರಿಗಳನ್ನು ಸೆಳೆದುಕೊಳ್ಳುತ್ತದೆ. ಈ ಲಹರಿಗಳು ಜೀವದ ಆಜ್ಞಾಚಕ್ರದಿಂದ ಶರೀರದಲ್ಲಿ ಸೇರಿಕೊಳ್ಳುವುದರಿಂದ ಶರೀರದಲ್ಲಿನ ರಜ-ತಮ ಕಣಗಳ ಪ್ರಾಬಲ್ಯವು ಹೆಚ್ಚಾಗುತ್ತದೆ. ಸತತವಾಗಿ ಟಿಕಲಿಯನ್ನು ಹಚ್ಚಿಕೊಳ್ಳುವುದರಿಂದ ಆ ಸ್ಥಳದಲ್ಲಿ ಕೆಟ್ಟಶಕ್ತಿಗಳ ಸ್ಥಾನವು ನಿರ್ಮಾಣವಾಗುವ ಸಾಧ್ಯತೆಯಿರುತ್ತದೆ.

(ಈ ಶಾಸ್ತ್ರದ ಮಾಹಿತಿಯಿಲ್ಲದಿರುವುದರಿಂದ ಮತ್ತು ಹಿಂದೂ ಧರ್ಮದಲ್ಲಿನ ಮಂಗಲಕರ ವಿಷಯಗಳೆಡೆಗೆ ನೋಡುವ ಆಸಕ್ತಿಯೂ ಇಲ್ಲದಿರುವುದರಿಂದ ಇತ್ತೀಚೆಗೆ ಸ್ತ್ರೀಯರು ಹಾಗೂ ಯುವತಿಯರು ಕುಂಕುಮವನ್ನು ಹಚ್ಚಿಕೊಳ್ಳುವುದರ ಬದಲು ಟಿಕಲಿಯನ್ನು ಉಪಯೋಗಿಸುತ್ತಿದ್ದಾರೆ.)


-ಸಂಗ್ರಹ 

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕರ್ನಾಟಕದ ನಂಬರ್ಒನ್ ಶ್ರೀಮಂತ ದೇವಸ್ಥಾನ




ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ ಸೇರಿರುವಒಟ್ಟು 34,217 ದೇವಸ್ಥಾನಗಳಿವೆ. ಅವುಗಳಲ್ಲಿಆದಾಯ ಗಳಿಕೆಯಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮೊದಲವಾರ್ಷಿಕ ಆದಾಯ 44.8225 ಕೋಟಿ ರೂ.ಬೇರೆಮುಜರಾಯಿ ದೇವಸ್ಥಾನಗಳಿಗೆ ಹೋಲಿಸಿದರೆಬರುವ ಭಕ್ತರ ಸಂಖ್ಯೆಯೂ ಅತ್ಯಧಿಕ.
'ದೇವಸ್ಥಾನಕ್ಕೆ ಪ್ರತಿದಿನ ಅಂದಾಜು 2ರಿಂದ 5ಸಾವಿರ ಭಕ್ತರು ದರ್ಶನಕ್ಕೆ ಬರುತ್ತಾರೆ. ಇಲ್ಲಿಸೇವೆ ಮತ್ತು ಹುಂಡಿ ರೂಪದಲ್ಲಿ ಹೆಚ್ಚಿನ ಹಣಸಂಗ್ರಹವಾಗುತ್ತಿದೆ. ತಿಂಗಳಿಗೆಅಂದಾಜು 50ರಿಂದ 60 ಲಕ್ಷ ರೂ. ಕಾಣಿಕೆಬರುತ್ತದೆ' ಇನ್ನು ರಾಜ್ಯದ2ನೇ ಶ್ರೀಮಂತ ಪುಣ್ಯಕ್ಷೇತ್ರಕೊಳ್ಳೆಗಾಲದ ಮಲೆ ಮಹದೇಶ್ವರ ಸ್ವಾಮಿ. ಈಕ್ಷೇತ್ರದ ಆದಾಯ 26.5021 ಕೋಟಿ ರೂ.ಶ್ರೀಮಂತಿಕೆಯಲ್ಲಿ 3ನೇ ಸ್ಥಾನದಲ್ಲಿರುವಮುಜರಾಯಿ ದೇವಸ್ಥಾನ ಕುಂದಾಪುರದಶ್ರೀ ಕೊಲ್ಲೂರು ಮೂಕಾಂಬಿಕೆ.
ಈ ದೇವಳದವಾರ್ಷಿಕ ಆದಾಯ 17.4844 ಕೋಟಿ ರೂ.ಇನ್ನೂ ಸಂಪತ್ತು ಗಳಿಕೆಯಲ್ಲಿ 4ನೇ ಸ್ಥಾನದಕ್ಷಿಣ ಕನ್ನಡ ಜಿಲ್ಲೆಕಟೀಲು ಶ್ರೀ ದುರ್ಗಾ ಪರಮೇಶ್ವರಿದೇವಸ್ಥಾನ. ಈ ತೀರ್ಥಕ್ಷೇತ್ರದ ಆದಾಯ10.07,89 ಕೋಟಿ ರೂ.ಶ್ರೀಮಂತ ಪಟ್ಟಿಯಲ್ಲಿ5ನೇ ಸ್ಥಾನದಲ್ಲಿ ಮೈಸೂರಿನಶ್ರೀ ಚಾಮುಂಡೇಶ್ವರಿ ದೇವಾಲಯವಿದೆ. ಇದರ
ಒಟ್ಟು ಸಂಪಾದನೆ 10.0874 ಕೋಟಿ ರೂ.ಹಾಗೆಯೇ 6ನೇ ಶ್ರೀಮಂತ ದೇವಳನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿದೇವಸ್ಥಾನ. ಈ ಪುಣ್ಯಕ್ಷೇತ್ರದ ಆದಾಯ9.8060 ಕೋಟಿ ರೂ. ಆ ಬಳಿಕ
7ನೇ ಕೋಟಾಧಿಪತಿ ಕ್ಷೇತ್ರ ಸವದತ್ತಿಯಯಲ್ಲಮ್ಮನಗುಡ್ಡ ಶ್ರೀ ರೇಣುಕ ಯಲ್ಲಮ್ಮದೇವಸ್ಥಾನ. ಈ ದೇವಸ್ಥಾನ ಸಂಪಾದನೆ7.89,80 ಕೋಟಿ ರೂ.ನಂತರದ ಸ್ಥಾನದಲ್ಲಿಉಡುಪಿ ಮಂದರ್ತಿಯ ಶ್ರೀ ದುರ್ಗಾ ಪರಮೇಶ್ವರಿದೇವಸ್ಥಾನವಿದೆ. ಇದರ ಆದಾಯ 3.8170ಕೋಟಿ ರೂ.ಇನ್ನು 3.73,39 ಕೋಟಿ ರೂ.
ಆದಾಯದೊಂದಿಗೆ ಬೆಂಗಳೂರಿನ ಶ್ರೀ ಬನಶಂಕರಿದೇವಸ್ಥಾನ 9ನೇ ಸ್ಥಾನದಲ್ಲಿದೆ.
ಕೊನೆಯದಾಗಿ ಕೊಪ್ಪಳದ ಶ್ರೀ ಹುಲಿಗಮ್ಮದೇವಸ್ಥಾನ 1.76,87 ಕೋಟಿಸಂಪಾದನೆಯೊಂದಿಗೆ 10ನೇ ಸ್ಥಾನದಲ್ಲಿದೆ.ಈಬಗ್ಗೆ ಪ್ರತಿಕ್ರಿಯಿಸಿರುವ ಮುಜರಾಯಿ ಇಲಾಖೆಆಯುಕ್ತ ಬಿ.ಎನ್. ಕೃಷ್ಣಯ್ಯ 'ರಾಜ್ಯದಲ್ಲಿಒಟ್ಟು 34 ಸಾವಿರಕ್ಕೂ ಹೆಚ್ಚು ಮುಜರಾಯಿದೇವಸ್ಥಾನಗಳಿವೆ. ಆದಾಯ ಗಳಿಕೆಯಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮೊದಲಸ್ಥಾನದಲ್ಲಿದೆ. ಆಯಾ ದೇವಸ್ಥಾನಗಳಆದಾಯ ಗಳಿಕೆ ಮೇಲೆಅವುಗಳನ್ನು ವರ್ಗೀಕರಿಸಲಾಗಿವೆ'ಎಂದು ಹೇಳಿದ್ದಾರೆ.'25 ಲಕ್ಷ ರೂ.ಮತ್ತು ಅದಕ್ಕಿಂತ ಹೆಚ್ಚಿನ ಆದಾಯವಿರುವದೇವಸ್ಥಾನಗಳನ್ನು 'ಎ' ಪಟ್ಟಿಗೆ ಸೇರಿಸಿದ್ದು,ಅಂತಹ 110 ದೇವಸ್ಥಾನಗಳಿವೆ.ಹಾಗೆಯೇ 5ರಿಂದ 25 ಲಕ್ಷ ರೂ. ಆದಾಯ ಗಳಿಕೆಪುಣ್ಯಕ್ಷೇತ್ರಗಳನ್ನು 'ಬಿ'ಪಟ್ಟಿಗೆ ಸೇರಿಸಿದ್ದು,ಅಂತಹ 175 ದೇವಸ್ಥಾನಗಳಿಗೆ. 5 ಲಕ್ಷಕ್ಕಿಂತಕಡಿಮೆ ಆದಾಯ ಬರುವ ದೇವಸ್ಥಾನಗಳನ್ನು 'ಸಿ'ವಿಭಾಗಕ್ಕೆ ಸೇರಿಸಿದ್ದು, ಅವು ಒಟ್ಟು 33,932ದೇವಸ್ಥಾನಗಳಿಗೆ'ಎಂದು ಆಯುಕ್ತರು ತಿಳಿಸಿದ್ದಾರೆ.ಟಾಪ್ 10ರಲ್ಲಿ ಕರಾವಳಿ 4 ಪುಣ್ಯಕ್ಷೇತ್ರರಾಜ್ಯದ 10 ಶ್ರೀಮಂತ ದೇವಸ್ಥಾನಗಳಪಟ್ಟಿಯಲ್ಲಿ ಕರಾವಳಿ ಭಾಗದ ಒಟ್ಟು 4ದೇವಸ್ಥಾನಗಳಿವೆ. ಅಂದರೆ ಧಾರ್ಮಿಕವಾಗಿಅತಿಹೆಚ್ಚು ಆದಾಯ ಬರುವ ದೇವಸ್ಥಾನ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿವೆ.ಇನ್ನು ಖಾಸಗಿ ಒಡೆತನದಲ್ಲಿರುವದೇವಸ್ಥಾನಗಳಿಗೆ ಹೋಲಿಸಿದರೂ ಧರ್ಮಸ್ಥಳದ
ಶ್ರೀ ಮಂಜುನಾಥೇಶ್ವರ ಕೂಡ ರಾಜ್ಯದಅತ್ಯಂತ ಶ್ರೀಮಂತ ದೇವಸ್ಥಾನಗಳಲ್ಲಿಒಂದು. ಹೀಗಾಗಿ, ಕರ್ನಾಟಕದಲ್ಲಿಅತಿಹೆಚ್ಚು ಭಕ್ತಾದಿಗಳು ಈ ಎರಡು ಜಿಲ್ಲೆಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ.


-ಸಂಗ್ರಹ 

ದುಬೈಯ ಗ್ಲೋಬಲ್ ವಿಲೇಜ್ !

ಯು.ಎ.ಇ(ಅರಬ್‌ ಸಂಯುಕ್ತ ಸಂಸ್ಥಾನ ) ಅಂದರೇ ಹೆಚ್ಚಿನವರಿಗೆ ತಿಳಿಯದು.ದುಬೈ ಅಂದರೆ ಥಟ್ಟನೆ ಇವತ್ತು ಹುಟ್ಟಿದ ಮಗುವಿಗೂ ಸಹಾ ಗೋತ್ತಿರುತ್ತದೆ, ತೈಲ ನಿಕ್ಷೇಪ,ಬಿಸಿಲಬೇಗೆ...